*ಗಂಗಾವತಿ* : ನಗರದ 6 ನೇ ವಾರ್ಡ್ ನ ರೈತ ಆಲಯ್ಯಸ್ವಾಮಿ ಶಾಸ್ತ್ರಿಮಠ ಇವರ ಸುಪುತ್ರ ವಿನಯ ಶಾಸ್ತ್ರಿಮಠ ಪಿಯುಸಿ ವಿಜ್ಞಾನ ವಿಭಾದಲ್ಲಿ ಶೇ.94 ರಷ್ಟು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾನೆ.ಇತ್ತೀಚಿನ ವರದಿ ಪ್ರಕಾರ ಉತ್ತರ ಕರ್ನಾಟಕ ಭಾಗದಲ್ಲಿ ವಿಷೇಶವಾಗಿರೈತರ ಮಕ್ಕಳು ಸಾಧನೆ ಮಾಡುತ್ತಿರುವುದು ಗಮನಾರ್ಹ ಸಂಗತಿಯಾಗಿದೆ.ನಮ್ಮ ಕೊಪ್ಪಳ ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢ, ಹಾಗೂ ಪಿಯುಸಿ ವಿಭಾಗಗಳಲ್ಲಿ ಸುಮಾರು ರೈತರ ಮಕ್ಕಳೇ ಮೆಲುಗೈ ಸಾಧಿಸಿರುವುದು ನಮ್ಮ ಜಿಲ್ಲೆಗೆ ಹೆಮ್ಮೆಯಾಗಿದೆ.ನಗರದ ಕೊಟ್ಟೂರುಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯಲ್ಲಿ ಪ್ರೌಢ ಶಿಕ್ಷಣ ಪಡೆದಿದ್ದು, ಎಸ್.ಎಸ್.ಎಲ್.ಸಿಯಲ್ಲಿ ಪರೀಕ್ಷೆಯಲ್ಲಿಯು ವಿನಯ್ ಶೇ.94.56 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿರುವುದು ಸ್ಮರಿಸಲೇಬೇಕು.ಈ ವಿದ್ಯಾರ್ಥಿಯು ಜುಲೈ ನಗರದ ಶ್ರೀವಿದ್ಯಾನಿಕೇತನ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತಿದ್ದು, ಕಾಲೇಜ್ ಉಪನ್ಯಾಸಕರ ಉತ್ತಮ ಬೋಧನೆ ಹಾಗೂ ಪ್ರಾಚಾರ್ಯರ ಸಹಕಾರದಿಂದ ಉತ್ತಮ ಅಂಕಗಳಿಸಲು ಸಹಕಾರಿಯಾಗಿದೆ ಎಂದು ವಿನಯ್ ಪತ್ರಿಕೆಗೆ ತಿಳಿಸಿದ್ದಾನೆ.ಈ ವಿದ್ಯಾರ್ಥಿಯ ಸಾಧನೆಗೆ ಪಾಲಕರು, ಸ್ನೇಹಿತರು ಹಾಗೂ ಕಾಲೇಜ್ ಆಡಳಿತ ಮಂಡಳಿಯವರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
Related Posts
ಕೂಲಿಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಸಣೆ ಶಿಬಿರ
ಅಂದರು, ವಿಕಲಚೇತನರು, ವೃದ್ಧರು, ನಿರೊದ್ಯೋಗ ಮಹಿಳೆ&ಪುರುಷರಿಗೆ ಸ್ವಾವಲಂಬಿ ಜೀವನಕ್ಕೆ ಆಧಾರ ಸ್ಥಂಭವಾದ ನರೇಗಾ ಯೋಜನೆ, ಕೂಲಿಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಸಣೆ ಶಿಬಿರಗದಗ ಕರ್ನಾಟಕ ವಾರ್ತೆ ಜುನ್ 9:…
ಈಜುಕೊಳದಲ್ಲಿ ಮೃತಪಟ್ಟ ಇಂದ್ರೇಶ ಮನೆಗೆ ಭೇಟಿ ನೀಡಿದ ಶ್ರೀನಾಥ್
ಗಂಗಾವತಿ: ತಾಲೂಕಿನ ಇಂದರಗಿ ಗ್ರಾಮದ ರಾಮಣ್ಣ ಚಾಪುಡಿ ಈಳಿಗೇರ ಇವರ ಹದಿನೇಳು ವರ್ಷ ಮಗನಾದ ಇಂದ್ರೇಶ ಚಾಪುಡಿ ಈಡಿಗೇರ್ ಈತ ಕೊಪ್ಪಳದ ಈಜುಕೊಳದಲ್ಲಿ ಈಜಾಡಲು ಹೋಗಿ ಮೃತಪಟ್ಟಿದ್ದ,…
ಶಿಗ್ಲಿಯಲ್ಲಿ ಸಂಜೀವಿನಿ ಮಾಸಿಕ ಸಂತೆಗೆ ಚಾಲನೆ
ಲಕ್ಷ್ಮೇಶ್ವರ : ಗ್ರಾಮೀಣ ಪ್ರದೇಶಗಳ ಸಂಜೀವಿನಿ ಮಹಿಳಾ ಗುಂಪಿನ ಸದಸ್ಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಉತ್ತೇಜನ, ಕಲ್ಪಿಸುವ ಉದ್ದೇಶದಿಂದ ಈ ಮಾಸಿಕ ಸಂತೆಗೆ ಚಾಲನೆ ನೀಡಲಾಗಿದೆ ಎಂದು…