
ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ದೇಶ ಭಾರತ
ಗದಗ (ಕರ್ನಾಟಕ ವಾರ್ತೆ) ಸೆಪ್ಟೆಂಬರ್ 15: ವಿಶ್ವದಲ್ಲಿ ಹಲವಾರು ದೇಶಗಳು ಪ್ರಜಾಪ್ರಭುತ್ವಕ್ಕೆ ತಮ್ಮ ತಮ್ಮ ವಿಚಾರಗಳನ್ನು ಅಳವಡಿಸಿಕೊಂಡಿವೆ. ಆದರೆ ಭಾರತ ದೇಶವು ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ ಎಂದು ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ ತಿಳಿಸಿದರು.
ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯ ಹಾಲ್ದಲ್ಲಿ ಸೋಮವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ದೇಶಕ್ಕೆ ಸ್ವಾತಂತ್ರö್ಯ ಸಿಕ್ಕ ನಂತರ ಪ್ರಜೆಗಳ ಹಿತಕ್ಕೋತಸ್ಕರವಾಗಿಯೇ ಪ್ರಜಾಪ್ರಭುತ್ವದ ಅವಶ್ಯಕತೆ ಇದೆ ಎನ್ನುವ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರದಿಂದಲೇ ದೇಶವು ಅಖಂಡ ಭಾರತವಾಗಿ ಉಳಿಯಲು ಸಾಧ್ಯವಾಯಿತು. ಪ್ರಜಾಪ್ರಭುತ್ವ ವ್ಯವಸ್ಥೆ ಮನವರಿಕೆ ಮಾಡಲು 2007 ರಲ್ಲಿ ಯುನೈಟೆಡ್ ನೇಶನ್ ದ ಸದಸ್ಯರೆಲ್ಲರೂ ನಿರ್ಣಯಿಸಿದರು. ತದನಂತರ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನವನ್ನು 2008 ರಿಂದ ಆಚರಿಸಲಾಗುತ್ತಿದೆ. ಸರ್ಕಾರ ಮತ್ತು ಪ್ರಜೆಗಳ ಮಧ್ಯೆ ಆಡಳಿತ ವ್ಯವಸ್ಥೆ ಕಲ್ಪಿಸುವ ಮಹತ್ವದ ಹೆಜ್ಜೆ ಇದಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ಪೂರ್ಣ ಪ್ರಮಾಣದಲ್ಲಿ ಸಾಧಿಸಬೇಕಾಗಿದೆ. ವಿಶೇಷವಾಗಿ ಆರ್ಥಿಕ ಮತ್ತು ಸಾಮಾಜಿಕ ಸಮಾನತೆ ತರಬೇಕಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿಲ್ಲದ ದೇಶಗಳೂ ಸಹಿತ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಪ್ಪಿಕೊಳ್ಳುವ ಮಹತ್ವದ ಹೆಜ್ಜೆ ಇಡಬೇಕು.

ಪ್ರಜಾಪ್ರಜಾಪ್ರಭುತ್ವದಲ್ಲಿ ಶಾಂತಿ ಮತ್ತು ಸಮಾನತೆ ಅವಕಾಶ ಕಲ್ಪಿಸಲಾಗಿದೆ ಎಂದರು.ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಮಾತನಾಡಿ ಪ್ರಜೆಗಳ ಅಧೀನದಲ್ಲಿನ ಸರ್ಕಾರವೇ ಪ್ರಜಾಪ್ರಭುತ್ವವಾಗಿದೆ. ಪ್ರತಿಯೊಬ್ಬರೂ ಸ್ವಾತಂತ್ರö್ಯವಾಗಿ ಇರುವುದು ಸಂವಿಧಾನದಿAದ ಸಾಧ್ಯವಾಗಿದೆ. ಸಮಾಜದಲ್ಲಿನ ಎಲ್ಲ ಪ್ರಜೆಗಳೂ ಕಾನೂನಿನ ಚೌಕಟ್ಟಿನೊಳಗೆ ಇರಬೇಕಾಗುತ್ತದೆ. ಎಂತಹ ಪ್ರತಿಷ್ಟಿತ ವ್ಯಕ್ತಿಯೂ ಸಹಿತ ಕಾನೂನು ಉಲ್ಲಂಘನೆ ಮಾಡಿದರೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ. ಸಂವಿಧಾನದ ಬೆಲೆ ಶಿಕ್ಷಣ ಪಡೆದಾಗ ಮಾತ್ರ ಸಾಧ್ಯವಾಗುತ್ತದೆ. ಸಂವಿಧಾನದಲ್ಲಿ ಮೀಸಲಾತಿ ಇರದೇ ಹೋಗಿದ್ದರೆ ಕೆಳವರ್ಗದ ಪ್ರಜೆಗಳು ಸಮಾಜ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಪ್ರಜಾಪ್ರಭುತ್ವದ ಕುರಿತು ಇನ್ನೂ ಹೆಚ್ಚು ಅರಿವು ಮೂಡಿಸುವ ಕಾರ್ಯವು ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಆಗಬೇಕಿದೆ ಎಂದು ಡಾ.ಚಂದ್ರು ಲಮಾಣಿ ಅಭಿಪ್ರಾಯ ಪಟ್ಟರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕ್ರಿ.ಶ.1949 ರಲ್ಲಿ ಸಂವಿಧಾನ ಜಾರಿಗೆ ತಂದು ಬದಲಾವಣೆ ತಂದರು. ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸದೇ ಇದ್ದರೆ ಕೆಳಹಂತದಲ್ಲಿರುವ ಪ್ರಜೆಗಳು ಅಧಿಕಾರ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಭಾರತವು ಬಲಿಷ್ಠ ಹಾಗೂ ಶ್ರೇಷ್ಟವಾದ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಎಲ್ಲ ಸೌಲಭ್ಯಗಳು ದೊರಕಬೇಕಾಗಿದೆ ಎಂದರು.ಗದಗ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಚ್.ಎ. ಕರ್ನೂಲ ಮಾತನಾಡಿ ವಿಶ್ವದ 195 ದೇಶಗಳಲ್ಲಿ ಭಾರತ ದೇಶವು ಪ್ರಜಾಪ್ರಭುತ್ವದಲ್ಲಿ ತನ್ನದೇ ಆದ ವೈಶಿಷ್ಟತೆ ಹಾಗೂ ಮಹತ್ವ ಹೊಂದಿದೆ. ವಿವಿಧತೆಯಲ್ಲಿ ಏಕತೆಯನ್ನು ಹಾಗೂ ಏಕತೆಯಲ್ಲಿ ವಿವಿಧತೆಯನ್ನು ಸಾರಿದಂತಹ ಈ ದೇಶ. ಸರ್ವೇ ಜನಾ: ಸುಖಿನೋ ಭವಂತು, ವಸುಧೈವ ಕುಟುಂಬಕA ಎನ್ನುವ ಮೂಲಕ ಸಮಾನತೆಯನ್ನು ಸಾರುತ್ತದೆ. ಪ್ರತಿಯೊಬ್ಬರೂ ಈ ತತ್ವವನ್ನು ಅಳವಡಿಸಿಕೊಂಡು ಬಂದಿದ್ದೇವೆ. ಸಂವಿಧಾನದ ಮೂರು ಅಂಗಗಳು ಒಂದಕ್ಕೊಂದು ಪೂರಕವಾಗಿವೆ.
18 ವರ್ಷ ಪೂರೈಸಿದ ಪ್ರತಿ ಸ್ತಿçà ಪುರುಷರೂ ಮುಕ್ತವಾಗಿ ತಮ್ಮ ಮತದಾನ ಮಾಡಬಹುದಾಗಿದೆ. ಬಂದೂಕಿನ ಅಸ್ತಕ್ಕಿಂತ ಮತದಾನವು ಬಲಿಷ್ಟವಾಗಿದೆ. ನಿರಂತರ ಜಾಗರೂಕತೆಯೇ ಪ್ರಜಾಪ್ರಭುತ್ವದ ಬೆಲೆಯಾಗಿದೆ. ದಾರ್ಶನಿಕರು , ಹಿರಿಯರು ಹಾಕಿದ ಮಾರ್ಗದರ್ಶನ ಮತ್ತು ಅಹಿಂಸೆಯಲ್ಲಿ ನಾವು ತೊಡಗಿಕೊಂಡು ಸಂವಿಧಾನವನ್ನು ಗೌರವಿಸಬೇಕಾಗಿದೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು. ಇದೇ ಸಂದರ್ಭದಲ್ಲಿ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಚಿತ್ರಕಲೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

. ಗದಗ ಬೆಟಗೇರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ , ಎಸ್.ಎನ್.ಬಳ್ಳಾರಿ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು, ಸಿಬ್ಬಂದಿಗಳು ಹಾಜರಿದ್ದರು.ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಪ್ರಸ್ತುತಪಡಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸರ್ವರನ್ನು ಸ್ವಾಗತಿಸಿದರು. ಎಚ್.ಆರ್.ಸಕ್ರಿ ವಂದಿಸಿದರು. ವೀರಯ್ಯ ಹೊಸಮಠ ಕಾರ್ಯಕ್ರಮ ನಿರೂಪಿಸಿದರು.
