
ಅಶೋಕ ಮಂದಾಲಿ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ.ಅಶೋಕ ಮಂದಾಲಿ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ.
ರೇಶನ್ ಕಾರ್ಡಗೆ ಅರ್ಹರಿರುವ ಫಲಾನುಭವಿಗಳ ಸರ್ವೆ ಕಾರ್ಯ ನಡೆಸಿ
ಗದಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 15 : ಗದಗ ತಾಲೂಕಿನಲ್ಲಿ ರೇಶನ್ ಕಾರ್ಡಗೆ ಅರ್ಹರಿರುವ ಫಲಾನುಭವಿಗಳ ಸರ್ವೆ ಕಾರ್ಯವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ಯಾರಂಟಿ ಸಮಿತಿ ಸದಸ್ಯರು ಜಂಟಿಯಾಗಿ ನಡೆಸುವಂತೆ ತಾಲೂಕಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ ವಿಸಿ ಹಾಲ್ ದಲ್ಲಿ ಸೋಮವಾರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರAಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು ಈ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಒದಗಿಸುವಲ್ಲಿ ವಿಳಂಬವಾಗಬಾರದು. ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಂತಾಗಬೇಕು. ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಶೇ 100 ರಷ್ಟು ಸಾಧಿಸಲು ಸಂಬAಧಿತ ಅಧಿಕಾರಿಗಳು ಆಸಕ್ತಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.ಗ್ಯಾರಂಟಿ ಯೋಜನೆ ಅನುಷ್ಟಾನದಲ್ಲಿ ಪ್ರಾಮಾಣಿಕತನವಿರಬೇಕು. ಪಾರದರ್ಶಕ ಆಡಳಿತ ನಡೆಸಿ ಅರ್ಹರು ಇದರ ಲಾಭ ಪಡೆಯುವಂತಾಗಬೇಕು. ಪಂಚಗ್ಯಾರAಟಿ ಯೋಜನೆಯ ಮಹತ್ವವನ್ನು ಅರ್ಥೆÊಸಿಕೊಳ್ಳುವುದು ಹಾಗೂ ಅವುಗಳ ಪೂರ್ಣ ಪ್ರಮಾಣದ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಸಂಬAಧಿತ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಅಶೋಕ ಮಂದಾಲಿ ಹೇಳಿದರು. ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ ಮಾತನಾಡಿ ಪಂಚಗ್ಯಾರAಟಿ ಯೋಜನೆ ಲಭಿಸುವಲ್ಲಿ ಫಲಾನುಭವಿಗಳಿಗೆ ಯಾವುದೇ ಅಡಚಣೆಗಳು ಉಂಟಾದರೆ ಅಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಆದ್ದರಿಂದ ಪ್ರತಿ ಮೂರು ಪಂಚಾಯಿತಿ ಸೇರಿಸಿ ಜನಸ್ಪಂದನ ಸಭೆ ಮಾಡಲಾಗುವುದು ಎಂದು ಸಭೆಯ ಗಮನಕ್ಕೆ ತಂದರು. ಗ್ರಾಮೀಣ ಭಾಗದ ಅಧಿಕಾರಿಗಳು ಪಿಡಿಒ ಸೇರಿದಂತೆ ಸ್ಥಳದಲ್ಲಿಯೇ ಸಮಸ್ಯೆಗೆ ಸ್ಪಂದಿಸುವAತಾಗಬೇಕು.
ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಜಿಲ್ಲೆಯ ವಿವಿಧ ಬಸ್ ನಿಲ್ದಾಣಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯ ಸೇರಿದಂತೆ ಸ್ವಚ್ಛತೆಯ ಕುರಿತು ನಿಗಾ ವಹಿಸಬೇಕು ಎಂದು ಸೂಚಿಸಿದರು.ಪಂಚಗ್ಯಾರAಟಿ ಯೋಜನೆಯ ಗದಗ ತಾಲೂಕಿಗೆ ಸಂಬAದಿಸಿದAತೆ ಅಧಿಕಾರಿಗಳು ಈ ಕೆಳಗಿನಂತೆ ಸಭೆಗೆ ಮಾಹಿತಿ ಒದಗಿಸಿದರು.ಗೃಹಲಕ್ಷಿö ಯೋಜನೆಯಡಿ ಜೂನ್ 2025 ರವರೆಗೆ ಗದಗ ತಾಲೂಕಿನಲ್ಲಿ ಯಜಮಾನಿ ಹೆಸರಿನಲ್ಲಿ ಒಟ್ಟು 81959 ಜನರು ಪಡಿತರ ಹೊಂದಿರುತ್ತಾರೆ. 80911 ಅರ್ಜಿಗಳು ನೊಂದಣಿಯಾಗಿದ್ದು ಅದರಲ್ಲಿ 80447 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ಶೇ 99.42 ರಷ್ಟು ಪ್ರಗತಿ ಸಾಧಿಸಲಾಗಿದೆ.ಅನ್ನಭಾಗ್ಯ ಯೋಜನೆಯಡಿ ಗದಗ- ಬೆಟಗೇರಿ ಯಲ್ಲಿ ( ಐಆರ್ಎ) ಅಗಸ್ಟ್ 2025 ರ ಮಾಹೆಯಲ್ಲಿ ರಾಜ್ಯ ಸರಕಾರಿ ಅನ್ನಭಾಗ್ಯ ಹಂಚಿಕೆ ಯೋಜನೆಯಡಿ ಒಟ್ಟು 33558 ಪಡಿತರ ಕಾರ್ಡುಗಳಿದ್ದು ( ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುಗಳು) 5536.05 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ.
ಅಗಸ್ಟ್ -2025 ಮಾಹೆಯಲ್ಲಿ ( ಕೇಂದ್ರ ಸರ್ಕಾರ ) ಎನ್ಎಫ್ಎಸ್ಎ ಅಕ್ಕಿ ಹಂಚಿಕೆಯಡಿ ಒಟ್ಟು 33558 ಕಾರ್ಡುಗಳಿದ್ದು (ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುಗಳೂ) 2326.76 ಕ್ವಿಂಟಾಲ್ ಅಕ್ಕಿ ಹಂಚಿಕೆ ಮಾಡಲಾಗಿದೆ.ಗೃಹಜ್ಯೋತಿ ಯೋಜನೆಯಡಿ 31-8-2025 ರವರೆಗೆ ಗದಗ ಶಹರ ಉಪವಿಭಾಗದಲ್ಲಿ 46482 ಸ್ಥಾವರಗಳು ಅರ್ಹವಾಗಿದ್ದು, 46267 ಸ್ಥಾವರಗಳ ನೋಂದಣಿಯಾಗಿದ್ದು ಶೇ 99.54 ಪ್ರಗತಿಯಾಗಿದೆ. ದಿ: 31-8-2025 ರವರೆಗೆ ಗೃಹ ಜ್ಯೋತಿ ಯೋಜನೆಯಡಿ ಗದಗ ಗ್ರಾಮೀಣ ಉಪವಿಭಾಗದಲ್ಲಿ 53268 ಸ್ಥಾವರಗಳು ಅರ್ಹವಾಗಿದ್ದು 53070 ಸ್ಥಾವರಗಳ ನೊಂದಣಿಯಾಗಿವೆ. ಶೇ 99.63 ಪ್ರಗತಿಯಾಗಿದೆ. ಯುವನಿಧಿ ಯೋಜನೆಯಡಿ ಗದಗ ತಾಲೂಕಿನಲ್ಲಿ 31-8-2025 ರವರೆಗೆ 2231 ಅಭ್ಯರ್ಥಿಗಳು ನೊಂದಾಯಿಸಿಕೊAಡಿದ್ದಾರೆ. ಅದರಲ್ಲಿ 1761 ಅರ್ಹ ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ಹಣ ವರ್ಗಾವಣೆಯಾಗಿರುತ್ತದೆ ಎಂದು ಸಂಬAಧಿತ ಅಧಿಕಾರಿಗಳು ಮಾಹಿತಿ ಒದಗಿಸಿದರು. ಸಭೆಗೂ ಮುನ್ನ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನದ ಪ್ರಸ್ತಾವನೆಯನ್ನು ಜಿಲ್ಲಾ ಸಮಿತಿ ಸದಸ್ಯ ಶರೀಫ್ ಬೆಳೆಯಲಿ ಅವರು ಬೋಧಿಸಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ನಿಲಮ್ಮ ಬೋಳನವರ, ಸದಸ್ಯರುಗಳಾದ ಈರಣ್ಣ ಹುನಸಿಕಟ್ಟಿ, ಶರೀಫ ಬೆಳೆಯಲಿ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರುಗಳಾದ ದಯಾನಂದ ಪವಾರ, ಶಂಭು ಕಾಳೆ, ಶ್ರೀಮತಿ ಸಾವಿತ್ರಿ ಹೂಗಾರ, ಸಂಗು ಕೆರಕಲಕಟ್ಟಿ, ಎನ್.ಬಿ.ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿಕಾಯ್ಕರ, ದೇವರಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ ಚಿಂಚಲಿ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಎಚ್ ಬಾರಕೇರ , ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ ಹಾಗೂ ಪಂಚ ಗ್ಯಾರಂಟಿ ಯೋಜನೆಗೆ ಸಂಬAಧಿತ ಅಧಿಕಾರಿಗಳು ಹಾಜರಿದ್ದರು.
