
Áಅಜಣ್ಣ ಮಲ್ಲಾಡದ ಅವರಿಗೆ ಸನ್ಮಾನ ಗದಗ : ನಗರದ ಲಯನ್ಸ್ ಕ್ಲಬ್ನ ೨೦೨೫-೨೬ನೇ ಸಾಲಿಗೆ ಕಾರ್ಯದರ್ಶಿಯಾಗಿ ಆಯ್ಕೆಯಾದ ಗಣ್ಯ ಉದ್ಯಮಿ ಹಾಗೂ ಶ್ರೀ ಅನ್ನಪೂರ್ಣೆಶ್ವರಿ ಪ್ರಸಾದ ನಿಲಯದ ಸದಸ್ಯರಾದ ರಾಜಣ್ಣ ಮಲ್ಲಾಡದ ಅವರನ್ನು ನಗರದ ಶ್ರೀ ಅನ್ನಪೂರ್ಣೆಶ್ವರಿ ಪ್ರಸಾದ ನಿಲಯದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನಿಲಯದ ಗೌರವಾಧ್ಯಕ್ಷರಾದ ಎಸ್.ಎಸ್. ಕಳಸಾಪೂರ, ಉಪಾಧ್ಯಕ್ಷರಾದ ಉಮೇಶ ಪೂಜಾರ, ಪದಾಧಿಕಾರಿಗಳಾದ ಗುರುಮೂರ್ತಿ ಮರೇಗುದ್ದಿ, ವೆಂಕಟೇಶ ಇಮರಾಪೂರ, ಮುತ್ತು ಜಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.